ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.
Go to Home Page