ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.