ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.