ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.