“ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.