ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.