“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.