ಸರ್ವೇಶ್ವರನ ಆಲಯದ ಮುಂದಿರುವ ತಾಮ್ರದ ಬಲಿಪೀಠ ಈ ಎಲ್ಲಾ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನ ಬಲಿಯ ಕೊಬ್ಬನ್ನೂ ಹಿಡಿಸುವಷ್ಟು ದೊಡ್ಡದಾಗಿರಲಿಲ್ಲ. ಆದುದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿಯೂ ಇವುಗಳನ್ನೆಲ್ಲ ಸಮರ್ಪಿಸಿದನು.
Go to Home Page