ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.