ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.