ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.