ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.