ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.