“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’