ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.
Go to Home Page