ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.