ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.