ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.