ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.