ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.